ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸೇವಿಸುವಾಗ ಆನೆಗಳು ಕಿತ್ತಾಡಿಕೊಂಡಿವೆ. ಗಂಡಾನೆಗೆ ಊಟ ಕೊಡುವಾಗ ಹೆಣ್ಣಾನೆ ಇರಬೇಕು. ನಿನ್ನೆ ಊಟ ಕೊಡುವಾಗ ಹೆಣ್ಣಾನೆ ಜೊತೆ ಇರಲಿಲ್ಲ. ಹೆಣ್ಣಾನೆ ಇಲ್ಲದ ಕಾರಣ ಕಂಜನ್ ಮೇಲೆ ಧನಂಜಯ ಆನೆ ದಾಳಿ ಮಾಡಿದೆ. ಧನಂಜಯ ಕಂಜನ್ ಆನೆಯನ್ನು ಓಡಿಸಿಕೊಂಡು ಹೋಗಿದ್ದಾನೆ. ಮದ ಬಂದಿತ್ತು ಎಂಬುದು ಸುಳ್ಳು. ಆ ಎರಡು ಆನೆಗಳಿಗೆ ಯಾವುದೇ ಮದ ಬಂದಿಲ್ಲ. ಸದ್ಯ ಆನೆಗಳು ನಿಯಂತ್ರಣದಲ್ಲಿವೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ನಿನ್ನೆ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಧನಂಜಯ ಹಾಗೂ ಕಂಜನ್ ಆನೆಗಳ ನಡುವೆ ದಿಢೀರ್ ಗುದ್ದಾಟ ಶುರುವಾಗಿ ಅರಮನೆಯಿಂದ ಏಕಾಏಕಿ ಹೊರ ಬಂದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…