ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು.
ಅರಮನೆ ಆವರಣದಲ್ಲಿ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಡಾ.ಎಂ.ಶಾಂತ ರಾಮಕೃಷ್ಣ ಅಭಿಮಾನಿ ಬಳಗದ ಸದಸ್ಯರು ಅರಿಶಿನ ಕುಂಕುಮ, ವೀಳ್ಯದೆಲೆ, ಬಾಳೆಹಣ್ಣು ಹಾಗೂ ತೆಂಗಿನಕಾಯಿ, ಸೀರೆ ವಿತರಿಸುವ ಮೂಲಕ ಬಾಗಿನ ನೀಡಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅವರು, ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ನಾಡಹಬ್ಬ ಸಹಕಾರಿಯಾಗಲಿದೆ. ಆ ಮೂಲಕ ಸಂಸ್ಕೃತಿ ಹಾಗೂ ಬದುಕಿನ ಸಂದೇಶವನ್ನು ಎಲ್ಲರಿಗೂ ತಲುಪಿಸುವುದೇ ಈ ಉತ್ಸವದ ಉದ್ದೇಶವಾಗಿದೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…