ಮೈಸೂರು ನಗರ

ತ್ರಿವರ್ಣ ಧ್ವಜ ಹಿಡಿದು ಸ್ವಚ್ಛತೆ ಸಂದೇಶ ಸಾರಿದ ದಸರಾ ಗಜಪಡೆ

ಮೈಸೂರು: ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು, ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು, ನಗರವನ್ನು ಸ್ವಚ್ಛತೆಯಾಗಿ ಇಡುವಂತೆ ಸಂದೇಶ ಸಾರಿದವು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಕಾರ್ಯಕ್ರಮ ಅಂಗವಾಗಿ ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು, ಪ್ರಶಾಂತ, ಏಕಲವ್ಯ, ಧನಂಜಯ, ಕಂಜನ್, ಕಾವೇರಿ, ಲಕ್ಷ್ಮಿ, ಮಹೇಂದ್ರ, ಭೀಮ ಆನೆಗಳು ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು ಸಾಗಿದವು.

ನಂತರ ಆನೆಗಳ ಮೇಲೆ ಕುಳಿತ ಮಾವುತರು, ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಆನೆಗಳ ಮೇಲೆ ಧ್ವಜ ಹಿಡಿದು, ಕೆ.ಆರ್.ಆಸ್ಪತ್ರೆ ವೃತ್ತದವರೆಗೆ ಸಾಗಿ, ವಾಪಸ್ ಅರಮನೆಗೆ ಪ್ರವೇಶ ಮಾಡಿದರು.

ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಕೂಡ ತ್ರಿವರ್ಣ ಧ್ವಜ ಹಿಡಿದು‌ ಸಾಗಿದರು.

ನಗರ ಪಾಲಿಕೆ ಸಿಬ್ಬಂದಿ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಎಂದು ಘೋಷಣೆ ಕೂಗುತ್ತ, ನಗರವನ್ನು ಸ್ವಚ್ಛವಾಗಿ ಇಡಲು ಸಾರ್ವಜನಿಕರು ಕೈ ಜೋಡಿಸಿ ಎಂದು ಮನವಿ ಮಾಡಿದರು.

ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪಾಲಿಕೆ ಆಯುಕ್ತ ತನ್ವೀರ್ ಶೇಕ್ ಆಸೀಫ್ ಅವರು, ಮೈಸೂರು ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಮುಂದಿನ ಬಾರಿ ಮೈಸೂರು ಸ್ವಚ್ಛತೆಯಲ್ಲಿ ನಂಬರ್ ಒನ್ ಸ್ಥಾನಗಳಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇನ್ನು ಮಳೆಯಿಂದ ಗುಂಡಿ ಬಿದ್ದಿರುವ ರಸ್ತೆಗಳನ್ನು ದಸರಾದೊಳಗೆ ದುರಸ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago