ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ.
ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಬ್ಯಾಟ್ ಮಾಡಿದ್ದರು.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ದಸರಾ ವೇದಿಕೆಯಲ್ಲಿ ರಾಜಕೀಯ ತಂದಿದ್ದಾರೆ. ಜಿ.ಟಿ.ದೇವೇಗೌಡ ಹಿರಿಯರಿದ್ದಾರೆ. ಯಾಕೆ ಆ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ಬರೀ 14 ಸೈಟ್ ಅಲ್ಲ, 4500 ಸೈಟ್ ಅಕ್ರಮವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಮುಂದಿಟ್ಟುಕೊಂಡು ಎಲ್ಲರೂ ರಕ್ಷಣೆ ಪಡೆಯುತ್ತಿದ್ದಾರೆ. ಮುಡಾ ಅಧಿಕಾರಿಗಳನ್ನು ರಕ್ಷಿಸುವ ಕೆಲಸ ಆಗುತ್ತಿದೆ. ಎಲ್ಲಾ ವಿಚಾರದಲ್ಲೂ ಸರ್ಕಾರ ತಪ್ಪು ಮಾಡಿದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆಯೂ ತನಿಖೆ ಆದರೆ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…