ಮೈಸೂರು ನಗರ

ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಬಾನು ಮುಷ್ತಾಕ್‌ ಬೂಕರ್ ಪ್ರಶಸ್ತಿ ವಿಜೇತೆಯಾಗಿದ್ದಾರೆ. ನಾಡಹಬ್ಬವನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ. ಇದು ಎಲ್ಲರ ಎಲ್ಲರ ಹಬ್ಬ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ವಿರೋಧ ಮಾಡುತ್ತಿರುವವರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕನ್ನಡತಾಯಿ ಬಗ್ಗೆ ಬಾನು ಮುಷ್ತಾಕ್‌ ಹೇಳಿಕೆ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ. ಅದಕ್ಕಾಗಿಯೇ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಷ್ಟೇ ಎಂದರು.

ಇನ್ನು ಬಾನು ಮುಷ್ತಾಕ್‌ ದನ ತಿಂದು ಉದ್ಘಾಟನೆಗೆ ಬರುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವಾರು ದನ ತಿನ್ನೋದನ್ನ ಅಶೋಕ್‌ ನೋಡಿದ್ದಾರಾ? ಬಿಜೆಪಿಗರು ಡೋಂಗಿಗಳು ಅವರ ಮಾತುಗಳನ್ನು ಕೇಳಬಾರದು ಎಂದು ವಾಗ್ದಾಳಿ ನಡೆಸಿದರು.

ಇನ್ನು ಅರಮನೆ ಮುಂಭಾಗ ದೀಪಾ ಬಸ್ತಿಗೂ ಸನ್ಮಾನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೂ ಸರ್ಕಾರದಿಂದ ಸನ್ಮಾನ ಮಾಡಿದ್ದೇವೆ. ದೀಪಾ ಬಸ್ತಿಗೂ ಕೂಡ ಸನ್ಮಾನ ಆಗುತ್ತೆ, ಮುಂದೆ ನೋಡೋಣ. ಆ ಬಗ್ಗೆಯೂ ಚರ್ಚೆ ಮಾಡ್ತೀನಿ ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago