ಮೈಸೂರು ನಗರ

ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಬಾನು ಮುಷ್ತಾಕ್‌ ಬೂಕರ್ ಪ್ರಶಸ್ತಿ ವಿಜೇತೆಯಾಗಿದ್ದಾರೆ. ನಾಡಹಬ್ಬವನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ. ಇದು ಎಲ್ಲರ ಎಲ್ಲರ ಹಬ್ಬ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ವಿರೋಧ ಮಾಡುತ್ತಿರುವವರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕನ್ನಡತಾಯಿ ಬಗ್ಗೆ ಬಾನು ಮುಷ್ತಾಕ್‌ ಹೇಳಿಕೆ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ. ಅದಕ್ಕಾಗಿಯೇ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಷ್ಟೇ ಎಂದರು.

ಇನ್ನು ಬಾನು ಮುಷ್ತಾಕ್‌ ದನ ತಿಂದು ಉದ್ಘಾಟನೆಗೆ ಬರುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವಾರು ದನ ತಿನ್ನೋದನ್ನ ಅಶೋಕ್‌ ನೋಡಿದ್ದಾರಾ? ಬಿಜೆಪಿಗರು ಡೋಂಗಿಗಳು ಅವರ ಮಾತುಗಳನ್ನು ಕೇಳಬಾರದು ಎಂದು ವಾಗ್ದಾಳಿ ನಡೆಸಿದರು.

ಇನ್ನು ಅರಮನೆ ಮುಂಭಾಗ ದೀಪಾ ಬಸ್ತಿಗೂ ಸನ್ಮಾನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೂ ಸರ್ಕಾರದಿಂದ ಸನ್ಮಾನ ಮಾಡಿದ್ದೇವೆ. ದೀಪಾ ಬಸ್ತಿಗೂ ಕೂಡ ಸನ್ಮಾನ ಆಗುತ್ತೆ, ಮುಂದೆ ನೋಡೋಣ. ಆ ಬಗ್ಗೆಯೂ ಚರ್ಚೆ ಮಾಡ್ತೀನಿ ಎಂದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

13 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

13 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

13 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

13 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

13 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago