ಮೈಸೂರು ನಗರ

ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಬಾನು ಮುಷ್ತಾಕ್‌ ಬೂಕರ್ ಪ್ರಶಸ್ತಿ ವಿಜೇತೆಯಾಗಿದ್ದಾರೆ. ನಾಡಹಬ್ಬವನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ. ಇದು ಎಲ್ಲರ ಎಲ್ಲರ ಹಬ್ಬ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ವಿರೋಧ ಮಾಡುತ್ತಿರುವವರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕನ್ನಡತಾಯಿ ಬಗ್ಗೆ ಬಾನು ಮುಷ್ತಾಕ್‌ ಹೇಳಿಕೆ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ. ಅದಕ್ಕಾಗಿಯೇ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಷ್ಟೇ ಎಂದರು.

ಇನ್ನು ಬಾನು ಮುಷ್ತಾಕ್‌ ದನ ತಿಂದು ಉದ್ಘಾಟನೆಗೆ ಬರುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವಾರು ದನ ತಿನ್ನೋದನ್ನ ಅಶೋಕ್‌ ನೋಡಿದ್ದಾರಾ? ಬಿಜೆಪಿಗರು ಡೋಂಗಿಗಳು ಅವರ ಮಾತುಗಳನ್ನು ಕೇಳಬಾರದು ಎಂದು ವಾಗ್ದಾಳಿ ನಡೆಸಿದರು.

ಇನ್ನು ಅರಮನೆ ಮುಂಭಾಗ ದೀಪಾ ಬಸ್ತಿಗೂ ಸನ್ಮಾನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೂ ಸರ್ಕಾರದಿಂದ ಸನ್ಮಾನ ಮಾಡಿದ್ದೇವೆ. ದೀಪಾ ಬಸ್ತಿಗೂ ಕೂಡ ಸನ್ಮಾನ ಆಗುತ್ತೆ, ಮುಂದೆ ನೋಡೋಣ. ಆ ಬಗ್ಗೆಯೂ ಚರ್ಚೆ ಮಾಡ್ತೀನಿ ಎಂದರು.

ಆಂದೋಲನ ಡೆಸ್ಕ್

Recent Posts

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

7 mins ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

14 mins ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

18 mins ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

24 mins ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

48 mins ago

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…

57 mins ago