ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ ಬಳಿಯುವುದು ಸೇರಿದಂತೆ ಹಲವು ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.
ಈಗಾಗಲೇ ಅನೇಕ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ದಸರಾ ವೈಭವ ಮರುಕಳಿಸಲೆಂದೇ ನಗರಗಳಲ್ಲಿರುವ ರಾಜಮಹಾರಾಜರು ಹಾಗೂ ಪ್ರಮುಖರ ಪ್ರತಿಮೆಗಳನ್ನು ಸ್ವಚ್ಛಗೊಳಿಸಲಾಗಿದೆ.
ಇನ್ನು ಅಲ್ಲಲ್ಲಿ ಒಳಚರಂಡಿ ದುರಸ್ತಿಗೊಳಿಸಲಾಗುತ್ತಿದ್ದು, ಪ್ರಮುಖ ಕಟ್ಟಡಗಳಿಗೆ ಬಣ್ಣ ಬಳಿಯಲಾಗಿದೆ. ಇನ್ನೂ ಹಲವು ಕಡೆ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ.
ಇನ್ನು ಅರಮನೆಯ ದರ್ಬಾರ್ ಹಾಲ್ ಸೇರಿದಂತೆ ಅರಮನೆಗೆ ಸುತ್ತ ಮುತ್ತ ಬಣ್ಣ ಬಳಿಯಲಾಗಿದ್ದು, ವಿದ್ಯುತ್ ದೀಪಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇನ್ನು 10 ದಿನದಲ್ಲಿ ಅರಮನೆ ಒಳಗೆ ದಸರಾ ಸಿದ್ಧತಾ ಕಾರ್ಯಗಳನ್ನು ಮುಗಿಸಲು ಅರಮನೆ ಮಂಡಳಿ ಕ್ರಮ ಕೈಗೊಂಡಿದೆ.
ಇನ್ನು ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗುತ್ತಿದ್ದು, ದಸರಾ ವೈಭವ ನೋಡಲು ಜನತೆ ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…