ಮೈಸೂರು ನಗರ

ಅರಮನೆ ನಗರಿಯಲ್ಲಿ ದಸರಾಗೆ ಸಕಲ ಸಿದ್ಧತೆ: ರಸ್ತೆಗಳ ದುರಸ್ತಿ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್‌ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ ಬಳಿಯುವುದು ಸೇರಿದಂತೆ ಹಲವು ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಈಗಾಗಲೇ ಅನೇಕ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ದಸರಾ ವೈಭವ ಮರುಕಳಿಸಲೆಂದೇ ನಗರಗಳಲ್ಲಿರುವ ರಾಜಮಹಾರಾಜರು ಹಾಗೂ ಪ್ರಮುಖರ ಪ್ರತಿಮೆಗಳನ್ನು ಸ್ವಚ್ಛಗೊಳಿಸಲಾಗಿದೆ.

ಇನ್ನು ಅಲ್ಲಲ್ಲಿ ಒಳಚರಂಡಿ ದುರಸ್ತಿಗೊಳಿಸಲಾಗುತ್ತಿದ್ದು, ಪ್ರಮುಖ ಕಟ್ಟಡಗಳಿಗೆ ಬಣ್ಣ ಬಳಿಯಲಾಗಿದೆ. ಇನ್ನೂ ಹಲವು ಕಡೆ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ.

ಇನ್ನು ಅರಮನೆಯ ದರ್ಬಾರ್‌ ಹಾಲ್‌ ಸೇರಿದಂತೆ ಅರಮನೆಗೆ ಸುತ್ತ ಮುತ್ತ ಬಣ್ಣ ಬಳಿಯಲಾಗಿದ್ದು, ವಿದ್ಯುತ್‌ ದೀಪಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇನ್ನು 10 ದಿನದಲ್ಲಿ ಅರಮನೆ ಒಳಗೆ ದಸರಾ ಸಿದ್ಧತಾ ಕಾರ್ಯಗಳನ್ನು ಮುಗಿಸಲು ಅರಮನೆ ಮಂಡಳಿ ಕ್ರಮ ಕೈಗೊಂಡಿದೆ.

ಇನ್ನು ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗುತ್ತಿದ್ದು, ದಸರಾ ವೈಭವ ನೋಡಲು ಜನತೆ ಕಾತುರದಿಂದ ಕಾಯುತ್ತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago