ಮೈಸೂರು: ಕಳೆದ ಬಾರಿಯ ದಸರಾ ಟಿಕೆಟ್ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ್ ರಾವ್ ಚೌವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ 79,860 ದಸರಾ ಟಿಕೆಟ್ಗಳಲ್ಲಿ 25,703 ಟಿಕೆಟ್ಗಳನ್ನು ಸಾರ್ವಜನಿಕರಿಗೆ ಮೀಸಲು ಇಡಲಾಗಿತ್ತು.
ಆದರೆ ಸಾರ್ವಜನಿಕರಿಗೆ ಮಾರಾಟವಾದ ಟಿಕೆಟ್ಗಳು 4617 ಮಾತ್ರ. 54,157 ಟಿಕೆಟ್ಗಳು ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಮೀಸಲಾಗಿದ್ದವು. ಸಾರ್ವಜನಿಕರಿಗೆ ಮೀಸಲಿಟ್ಟ ಟಿಕೆಟ್ ರಾಜಕೀಯ ಪುಡಾರಿಗಳ ಪಾಲಾಗಿತ್ತು ಎಂದು ಕಿಡಿಕಾರಿದರು.
ಇನ್ನು ಇದರಿಂದ ಸರ್ಕಾರಕ್ಕೆ 2,63,38,000 ರೂ ನಷ್ಟವಾಗಿದೆ. ನೆಪಮಾತ್ರಕ್ಕೆ ಸಾರ್ವಜನಿಕರಿಗೆ ಮೀಸಲು ಎಂದು ದುಪ್ಪಟ್ಟು ಬೆಲೆಗೆ ರಾಜಕೀಯ ಪುಡಾರಿಗಳಿಂದ ಬ್ಲಾಕ್ನಲ್ಲಿ ಟಿಕಟ್ ಮಾರಾಟ ಮಾಡಲಾಗುತ್ತದೆ.
ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ದಾಖಲೆಗಳಿಂದ ಈ ವಿಚಾರ ಬಯಲಿಗೆ ಬಂದಿದೆ. ಈ ಕುರಿತು ಈಗಾಗಲೇ ಲೋಕಾಯುಕ್ತ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದೇವೆ.
ನಾಡಹಬ್ಬ ದಸರಾ ಕೇವಲ ಅಧಿಕಾರಿಗಳು ಹಾಗೂ ರಾಜಕಾರಣಿಗಳ ದಸರಾ ಆಗುತ್ತಾ ಇದೆ. ದಯಮಾಡಿ ಈ ಬಾರಿ ಇಂತಹ ಅವ್ಯವಹಾರ ತಪ್ಪಿಸಿ ಜನತಾ ದಸರಾ ಮಾಡಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸುಜಯ್ ಕುಮಾರ್ ಸಿಂಗ್, ಕಾರ್ಯದರ್ಶಿ ರಾಕೇಶ್, ನಿರ್ದೇಶಕ ಪ್ರದೀಪ್ ಬಿಡ್ಡನ್, ಸದಸ್ಯರಾದ ಪ್ರಜ್ವಲ್ ಕೃಷ್ಣ, ಭರತ್ ಕುಮಾರ್, ಎಸ್.ಸಂತೋಷ್ ಪೈ, ವೇಣುಗೋಪಾಲ್ ಹಾಜರಿದ್ದರು.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…