ಮೈಸೂರು: ಕಳೆದ ಬಾರಿಯ ದಸರಾ ಟಿಕೆಟ್ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ್ ರಾವ್ ಚೌವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ 79,860 ದಸರಾ ಟಿಕೆಟ್ಗಳಲ್ಲಿ 25,703 ಟಿಕೆಟ್ಗಳನ್ನು ಸಾರ್ವಜನಿಕರಿಗೆ ಮೀಸಲು ಇಡಲಾಗಿತ್ತು.
ಆದರೆ ಸಾರ್ವಜನಿಕರಿಗೆ ಮಾರಾಟವಾದ ಟಿಕೆಟ್ಗಳು 4617 ಮಾತ್ರ. 54,157 ಟಿಕೆಟ್ಗಳು ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಮೀಸಲಾಗಿದ್ದವು. ಸಾರ್ವಜನಿಕರಿಗೆ ಮೀಸಲಿಟ್ಟ ಟಿಕೆಟ್ ರಾಜಕೀಯ ಪುಡಾರಿಗಳ ಪಾಲಾಗಿತ್ತು ಎಂದು ಕಿಡಿಕಾರಿದರು.
ಇನ್ನು ಇದರಿಂದ ಸರ್ಕಾರಕ್ಕೆ 2,63,38,000 ರೂ ನಷ್ಟವಾಗಿದೆ. ನೆಪಮಾತ್ರಕ್ಕೆ ಸಾರ್ವಜನಿಕರಿಗೆ ಮೀಸಲು ಎಂದು ದುಪ್ಪಟ್ಟು ಬೆಲೆಗೆ ರಾಜಕೀಯ ಪುಡಾರಿಗಳಿಂದ ಬ್ಲಾಕ್ನಲ್ಲಿ ಟಿಕಟ್ ಮಾರಾಟ ಮಾಡಲಾಗುತ್ತದೆ.
ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ದಾಖಲೆಗಳಿಂದ ಈ ವಿಚಾರ ಬಯಲಿಗೆ ಬಂದಿದೆ. ಈ ಕುರಿತು ಈಗಾಗಲೇ ಲೋಕಾಯುಕ್ತ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದೇವೆ.
ನಾಡಹಬ್ಬ ದಸರಾ ಕೇವಲ ಅಧಿಕಾರಿಗಳು ಹಾಗೂ ರಾಜಕಾರಣಿಗಳ ದಸರಾ ಆಗುತ್ತಾ ಇದೆ. ದಯಮಾಡಿ ಈ ಬಾರಿ ಇಂತಹ ಅವ್ಯವಹಾರ ತಪ್ಪಿಸಿ ಜನತಾ ದಸರಾ ಮಾಡಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸುಜಯ್ ಕುಮಾರ್ ಸಿಂಗ್, ಕಾರ್ಯದರ್ಶಿ ರಾಕೇಶ್, ನಿರ್ದೇಶಕ ಪ್ರದೀಪ್ ಬಿಡ್ಡನ್, ಸದಸ್ಯರಾದ ಪ್ರಜ್ವಲ್ ಕೃಷ್ಣ, ಭರತ್ ಕುಮಾರ್, ಎಸ್.ಸಂತೋಷ್ ಪೈ, ವೇಣುಗೋಪಾಲ್ ಹಾಜರಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…