ಮೈಸೂರು: ಕಳೆದ ಬಾರಿಯ ದಸರಾ ಟಿಕೆಟ್ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ್ ರಾವ್ ಚೌವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ 79,860 ದಸರಾ ಟಿಕೆಟ್ಗಳಲ್ಲಿ 25,703 ಟಿಕೆಟ್ಗಳನ್ನು ಸಾರ್ವಜನಿಕರಿಗೆ ಮೀಸಲು ಇಡಲಾಗಿತ್ತು.
ಆದರೆ ಸಾರ್ವಜನಿಕರಿಗೆ ಮಾರಾಟವಾದ ಟಿಕೆಟ್ಗಳು 4617 ಮಾತ್ರ. 54,157 ಟಿಕೆಟ್ಗಳು ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಮೀಸಲಾಗಿದ್ದವು. ಸಾರ್ವಜನಿಕರಿಗೆ ಮೀಸಲಿಟ್ಟ ಟಿಕೆಟ್ ರಾಜಕೀಯ ಪುಡಾರಿಗಳ ಪಾಲಾಗಿತ್ತು ಎಂದು ಕಿಡಿಕಾರಿದರು.
ಇನ್ನು ಇದರಿಂದ ಸರ್ಕಾರಕ್ಕೆ 2,63,38,000 ರೂ ನಷ್ಟವಾಗಿದೆ. ನೆಪಮಾತ್ರಕ್ಕೆ ಸಾರ್ವಜನಿಕರಿಗೆ ಮೀಸಲು ಎಂದು ದುಪ್ಪಟ್ಟು ಬೆಲೆಗೆ ರಾಜಕೀಯ ಪುಡಾರಿಗಳಿಂದ ಬ್ಲಾಕ್ನಲ್ಲಿ ಟಿಕಟ್ ಮಾರಾಟ ಮಾಡಲಾಗುತ್ತದೆ.
ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ದಾಖಲೆಗಳಿಂದ ಈ ವಿಚಾರ ಬಯಲಿಗೆ ಬಂದಿದೆ. ಈ ಕುರಿತು ಈಗಾಗಲೇ ಲೋಕಾಯುಕ್ತ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದೇವೆ.
ನಾಡಹಬ್ಬ ದಸರಾ ಕೇವಲ ಅಧಿಕಾರಿಗಳು ಹಾಗೂ ರಾಜಕಾರಣಿಗಳ ದಸರಾ ಆಗುತ್ತಾ ಇದೆ. ದಯಮಾಡಿ ಈ ಬಾರಿ ಇಂತಹ ಅವ್ಯವಹಾರ ತಪ್ಪಿಸಿ ಜನತಾ ದಸರಾ ಮಾಡಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸುಜಯ್ ಕುಮಾರ್ ಸಿಂಗ್, ಕಾರ್ಯದರ್ಶಿ ರಾಕೇಶ್, ನಿರ್ದೇಶಕ ಪ್ರದೀಪ್ ಬಿಡ್ಡನ್, ಸದಸ್ಯರಾದ ಪ್ರಜ್ವಲ್ ಕೃಷ್ಣ, ಭರತ್ ಕುಮಾರ್, ಎಸ್.ಸಂತೋಷ್ ಪೈ, ವೇಣುಗೋಪಾಲ್ ಹಾಜರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…