Decision Taken to Release Water from Kabini Reservoir into Canals
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಇಂದು ಕಾಡಾದಲ್ಲಿರುವ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರಿಂಗ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಜುಲೈ.15ರಿಂದ ಕೆರೆಕಟ್ಟೆಗಳಿಗೆ ಹಾಗೂ ಜುಲೈ.25ರಿಂದ ಕಟ್ಟು ಪದ್ಧತಿಯ ಆಧಾರದಲ್ಲಿ ಕಬಿನಿ ಜಲಾಶಯದ ನಾಲೆಗಳಿಗೆ ನೀರು ಹರಿಸುವುದಾಗಿ ಪ್ರಕಟಿಸಿದರು.
ಕಟ್ಟು ನೀರು ಪದ್ಧತಿಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 10 ದಿನ ನಿಲ್ಲಿಸುವುದು) ನೀರು ಹರಿಸುವುದಾಗಿ ಸಚಿವರು ಹೇಳಿದರು.
ಸಭೆಯಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು, ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಎಂಎಲ್ಸಿ ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…