ಮೈಸೂರು ನಗರ

ಅವಹೇಳನಕಾರಿ ಪೋಸ್ಟ್‌: ಜಾಮೀನು ಮೊರೆ ಹೋದ ಆರೋಪಿ

ಮೈಸೂರು: ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಕೇಜ್ರಿವಾಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್‌ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆ 299ರ ಅಡಿ ಪೊಲೀಸರು ಬಂಧಿಸಿ. ಅದೇ ದಿನ ರಾತ್ರಿ 2.30ಕ್ಕೆ ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಆರೋಪಿ ಪರ ವಕೀಲರಾದ ಅ.ಮ.ಭಾಸ್ಕರ್‌ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆರೋಪಿ ಪರ ವಕೀಲರು, ಮೊಬೈಲ್‌ ವಶಕ್ಕೆ ಪಡೆಯದೇ, ಹೇಗೆ ಆತನೇ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾನೆಂದು ಬಂದಿಸಿದ್ದೀರಾ? ಇದು ಕಾನೂನು ಬಾಹಿರ ಎಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿ ಸತೀಶ್‌ನನ್ನು ನಾಳೆ ಕೋರ್ಟ್‌ಗೆ ಹಾಜರು ಪಡಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು.

ಆಂದೋಲನ ಡೆಸ್ಕ್

Recent Posts

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…

14 mins ago

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

22 mins ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

43 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

1 hour ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

1 hour ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

1 hour ago