ಮೈಸೂರು ನಗರ

ಆಪ್‌ ತಿರಸ್ಕರಿಸಿದ ದೆಹಲಿ ಜನತೆ: ಶಾಸಕ ಶ್ರೀವತ್ಸ

ಮೈಸೂರು: ಆಪ್‌ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ ಸುದೀರ್ಘ ಅವಧಿಯ ಬಳಿಕ ದೆಹಲಿಯಲ್ಲಿ ಬಿಜೆಪಿ ಗದ್ದುಗೆ ಏರಿದೆ. ಇದಕ್ಕೆ ಪ್ರಧಾನಿ ನರೇದ್ರ ಮೋದಿ, ಅಮಿತ್‌ ಶಾ, ಜೆಪಿ ನಡ್ಡಾ ಅವರು ಕಾರಣಕರ್ತರು ಎಂದರು.

ವಿರೋಧ ಪಕ್ಷಗಳ ಭ್ರಷ್ಟಚಾರ ಮುಂದೆ ಇಟ್ಟುಕೊಂಡು ವ್ಯವಸ್ಥಿತವಾಗಿ ಪ್ರಚಾರ ಮಾಡಿದ ಕಾರಣ ದೆಹಲಿಯ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಜೈಲಿಗೆ ಹೋದರೂ ಜೈಲಿನಲ್ಲಿಯೇ ಆಡಳಿತ ನಡೆಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆ ವಿರುದ್ಧವಾಗಿ ನಡೆದುಕೊಂಡರು. ಹಾಗೆಯೇ, ಎಎಪಿ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ನೊಂದಿದ್ದ ದೆಹಲಿ ಜನತೆ ಈ ಬಾರಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೂ ಭ್ರಷ್ಟಚಾರ ಆರೋಪ ಹೊತ್ತಿರುವವರ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಮುಂದೆ ನಡೆಯುವ ಚುನಾವಣೆಗಳಲ್ಲಿ ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟು ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷದ ಕಾರ್ಯಕರ್ತರಿಗೂ ಇವರ ನಡವಳಿಕೆ ಬೇಸರ ತರಿಸಿದೆ. ಬಿಜೆಪಿ ಹೈಕಮಾಂಡ್‌ ಚುನಾವಣೆಯತ್ತ ಗಮನ ಹರಿಸಿದ್ದ ಕಾರಣ ರಾಜ್ಯದ ವಿದ್ಯಮಾನದ ಬಗ್ಗೆ ಗಮನ ನೀಡಿರಲಿಲ್ಲ. ಈಗ ಚುನಾವಣೆ ಮುಗಿದಿದೆ. ಸದ್ಯದಲ್ಲೇ ರಾಜ್ಯ ಬಿಜೆಪಿ ನಾಯಕರ ಬಿಕ್ಕಟ್ಟು ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

59 seconds ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

13 mins ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

34 mins ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

42 mins ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

1 hour ago

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…

1 hour ago