ಮೈಸೂರು ನಗರ

ಆಪ್‌ ತಿರಸ್ಕರಿಸಿದ ದೆಹಲಿ ಜನತೆ: ಶಾಸಕ ಶ್ರೀವತ್ಸ

ಮೈಸೂರು: ಆಪ್‌ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ ಸುದೀರ್ಘ ಅವಧಿಯ ಬಳಿಕ ದೆಹಲಿಯಲ್ಲಿ ಬಿಜೆಪಿ ಗದ್ದುಗೆ ಏರಿದೆ. ಇದಕ್ಕೆ ಪ್ರಧಾನಿ ನರೇದ್ರ ಮೋದಿ, ಅಮಿತ್‌ ಶಾ, ಜೆಪಿ ನಡ್ಡಾ ಅವರು ಕಾರಣಕರ್ತರು ಎಂದರು.

ವಿರೋಧ ಪಕ್ಷಗಳ ಭ್ರಷ್ಟಚಾರ ಮುಂದೆ ಇಟ್ಟುಕೊಂಡು ವ್ಯವಸ್ಥಿತವಾಗಿ ಪ್ರಚಾರ ಮಾಡಿದ ಕಾರಣ ದೆಹಲಿಯ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಜೈಲಿಗೆ ಹೋದರೂ ಜೈಲಿನಲ್ಲಿಯೇ ಆಡಳಿತ ನಡೆಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆ ವಿರುದ್ಧವಾಗಿ ನಡೆದುಕೊಂಡರು. ಹಾಗೆಯೇ, ಎಎಪಿ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ನೊಂದಿದ್ದ ದೆಹಲಿ ಜನತೆ ಈ ಬಾರಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೂ ಭ್ರಷ್ಟಚಾರ ಆರೋಪ ಹೊತ್ತಿರುವವರ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಮುಂದೆ ನಡೆಯುವ ಚುನಾವಣೆಗಳಲ್ಲಿ ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟು ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷದ ಕಾರ್ಯಕರ್ತರಿಗೂ ಇವರ ನಡವಳಿಕೆ ಬೇಸರ ತರಿಸಿದೆ. ಬಿಜೆಪಿ ಹೈಕಮಾಂಡ್‌ ಚುನಾವಣೆಯತ್ತ ಗಮನ ಹರಿಸಿದ್ದ ಕಾರಣ ರಾಜ್ಯದ ವಿದ್ಯಮಾನದ ಬಗ್ಗೆ ಗಮನ ನೀಡಿರಲಿಲ್ಲ. ಈಗ ಚುನಾವಣೆ ಮುಗಿದಿದೆ. ಸದ್ಯದಲ್ಲೇ ರಾಜ್ಯ ಬಿಜೆಪಿ ನಾಯಕರ ಬಿಕ್ಕಟ್ಟು ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

3 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

6 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

7 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

7 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

8 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

8 hours ago