ಮೈಸೂರು ನಗರ

ಆಪ್‌ ತಿರಸ್ಕರಿಸಿದ ದೆಹಲಿ ಜನತೆ: ಶಾಸಕ ಶ್ರೀವತ್ಸ

ಮೈಸೂರು: ಆಪ್‌ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ ಸುದೀರ್ಘ ಅವಧಿಯ ಬಳಿಕ ದೆಹಲಿಯಲ್ಲಿ ಬಿಜೆಪಿ ಗದ್ದುಗೆ ಏರಿದೆ. ಇದಕ್ಕೆ ಪ್ರಧಾನಿ ನರೇದ್ರ ಮೋದಿ, ಅಮಿತ್‌ ಶಾ, ಜೆಪಿ ನಡ್ಡಾ ಅವರು ಕಾರಣಕರ್ತರು ಎಂದರು.

ವಿರೋಧ ಪಕ್ಷಗಳ ಭ್ರಷ್ಟಚಾರ ಮುಂದೆ ಇಟ್ಟುಕೊಂಡು ವ್ಯವಸ್ಥಿತವಾಗಿ ಪ್ರಚಾರ ಮಾಡಿದ ಕಾರಣ ದೆಹಲಿಯ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಜೈಲಿಗೆ ಹೋದರೂ ಜೈಲಿನಲ್ಲಿಯೇ ಆಡಳಿತ ನಡೆಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆ ವಿರುದ್ಧವಾಗಿ ನಡೆದುಕೊಂಡರು. ಹಾಗೆಯೇ, ಎಎಪಿ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ನೊಂದಿದ್ದ ದೆಹಲಿ ಜನತೆ ಈ ಬಾರಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೂ ಭ್ರಷ್ಟಚಾರ ಆರೋಪ ಹೊತ್ತಿರುವವರ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಮುಂದೆ ನಡೆಯುವ ಚುನಾವಣೆಗಳಲ್ಲಿ ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟು ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷದ ಕಾರ್ಯಕರ್ತರಿಗೂ ಇವರ ನಡವಳಿಕೆ ಬೇಸರ ತರಿಸಿದೆ. ಬಿಜೆಪಿ ಹೈಕಮಾಂಡ್‌ ಚುನಾವಣೆಯತ್ತ ಗಮನ ಹರಿಸಿದ್ದ ಕಾರಣ ರಾಜ್ಯದ ವಿದ್ಯಮಾನದ ಬಗ್ಗೆ ಗಮನ ನೀಡಿರಲಿಲ್ಲ. ಈಗ ಚುನಾವಣೆ ಮುಗಿದಿದೆ. ಸದ್ಯದಲ್ಲೇ ರಾಜ್ಯ ಬಿಜೆಪಿ ನಾಯಕರ ಬಿಕ್ಕಟ್ಟು ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

12 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

12 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago