ಮೈಸೂರು ನಗರ

ಥಗ್‌ಲೈಫ್‌ ಸಿನಿಮಾ ಬಹಿಷ್ಕಾರಕ್ಕೆ ಒತ್ತಾಯ: ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ

ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅಭಿನಯದ ಥಗ್‌ಲೈಫ್‌ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಿದರು.

ನಗರದ ಅಗ್ರಹಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್‌ ಹಾಸನ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರೇ ಕಮಲ್ ಹಾಸನ್ ಚಿತ್ರ ಬಹಿಷ್ಕರಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಸ್ವಾಭಿಮಾನಿ ಕನ್ನಡಿಗರೇ ಥಗ್ ಲೈಫ್ ಚಿತ್ರ ನೋಡಬೇಡಿ ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸೋಣ. ಆದರೆ ಕನ್ನಡ ಭಾಷೆಗೆ ಅವಮಾನ ಮಾಡಿರುವ ಕಮಲ್‌ ಹಾಸನ್‌ ಅಭಿನಯದ ಥಗ್ ಲೈಫ್ ಚಿತ್ರ ನೋಡಲ್ಲ. ಕಮಲ್‌ ಹಾಸನ್‌ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

48 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago