ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಗೆ ಆಗ್ರಹ: ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು.

ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ ಬರುತ್ತಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದವು ಭಕ್ತರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಸರ್ಕಾರದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಆಗ್ರಹಿಸಿದರು. ಸಾಂಸ್ಕೃತಿಕ ರಾಜಧಾನಿ ಮೈಸೂರು ಎಂದು ಹೆಸರು ಬರಲು ಮೈಸೂರಿಗರ ಸಂಸ್ಕಾರ ಹಾಗೂ ಸಂಸ್ಕೃತಿಯೇ ಕಾರಣ. ಪ್ರಾಚೀನವಾದ ಧಾರ್ಮಿಕ ಕ್ಷೇತ್ರ ಚಾಮುಂಡಿ ಬೆಟ್ಟಕ್ಕೆ ಆಷಾಢ ಮಾಸದ ಅಂಗವಾಗಿ ಬರುವವರು ನಮ್ಮ ಸಾಂಸ್ಕೃತಿಕ ಉಡುಪನ್ನು ಧರಿಸಿ ಬರಬೇಕು.

ಸರ್ಕಾರ ವಸ್ತ್ರ ನೀತಿ ಸಂಹಿತೆ ತರದಿದ್ದರೂ ಪರವಾಗಿಲ್ಲ. ನಮ್ಮ ಸಂಸ್ಕೃತಿಯನ್ನ ಪಾಲಿಸುವುದು ನಮ್ಮ ಕರ್ತವ್ಯ. ತಿರುಪತಿ ವೆಂಕಟೇಶ್ವರ ಸನ್ನಿಧಿ, ಕೇರಳದ ಶಿವನ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಅನೇಕ ದೇವಾಲಯಗಳಲ್ಲಿ ಕೋಟ್ಯಾಂತರ ಭಕ್ತರು ವಸ್ತ್ರ ಸಂಹಿತೆ ಪಾಲಿಸುತ್ತಿದ್ದಾರೆ. ನಮ್ಮ ಮೈಸೂರಿನ ಸಾಂಸ್ಕೃತಿಕತೆ ಪಾರಂಪರಿಕತೆಯನ್ನು ಉಳಿಸಿ ಪಾಲಿಸುವಲ್ಲಿ ಯುವ ಪೀಳಿಗೆ ಮುಂದಾಗಲಿ ಎಂದು ಮನವಿ ಮಾಡಿದರು.

ಚಾಮುಂಡೇಶ್ವರಿ ಭಕ್ತ ವೃಂದದ ಸಂಚಾಲಕ ಆನಂದ್ ನೇತೃತ್ವದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಹೇಶ್, ಶೃತಿ, ಶ್ವೇತಾ, ಕಿರಣ್, ಬಸವರಾಜು, ಮಣಿ, ಸೌಮ್ಯ. ಚಂದ್ರು, ಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago