ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ.
ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ.
ಮಾರುಕಟ್ಟೆಯಲ್ಲಂತೂ ಮಣ್ಣಿನ ಗಣೇಶ ಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಕರು ಹಬ್ಬದ ದಿನದಂದು ಮಣ್ಣಿನ ಗಣಪನನ್ನೇ ಕೂರಿಸಲು ಕಾತುರರಾಗಿದ್ದಾರೆ.
ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮಾರಾಟಕ್ಕೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮಣ್ಣಿನ ಗಣಪನನ್ನು ಕೂಡ ತಯಾರು ಮಾಡಲಾಗಿದೆ.
ಇನ್ನು ಜಲಮೂಲಗಳ ರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ನಿಸರ್ಗ ಸ್ನೇಹಿ ಹಾಗೂ ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಯುವಕರು ಪಿಒಪಿ ಗಣಪನನ್ನು ಕೂರಿಸುವ ಯೋಜನೆ ಕೈಬಿಟ್ಟಿದ್ದು, ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ ಅದ್ಧೂರಿಯಾಗಿ ಹಬ್ಬ ಮಾಡಲು ಕಾತುರರಾಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…