ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ.
ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ.
ಮಾರುಕಟ್ಟೆಯಲ್ಲಂತೂ ಮಣ್ಣಿನ ಗಣೇಶ ಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಕರು ಹಬ್ಬದ ದಿನದಂದು ಮಣ್ಣಿನ ಗಣಪನನ್ನೇ ಕೂರಿಸಲು ಕಾತುರರಾಗಿದ್ದಾರೆ.
ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮಾರಾಟಕ್ಕೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮಣ್ಣಿನ ಗಣಪನನ್ನು ಕೂಡ ತಯಾರು ಮಾಡಲಾಗಿದೆ.
ಇನ್ನು ಜಲಮೂಲಗಳ ರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ನಿಸರ್ಗ ಸ್ನೇಹಿ ಹಾಗೂ ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಯುವಕರು ಪಿಒಪಿ ಗಣಪನನ್ನು ಕೂರಿಸುವ ಯೋಜನೆ ಕೈಬಿಟ್ಟಿದ್ದು, ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ ಅದ್ಧೂರಿಯಾಗಿ ಹಬ್ಬ ಮಾಡಲು ಕಾತುರರಾಗಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…