ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ.
ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ.
ಮಾರುಕಟ್ಟೆಯಲ್ಲಂತೂ ಮಣ್ಣಿನ ಗಣೇಶ ಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಕರು ಹಬ್ಬದ ದಿನದಂದು ಮಣ್ಣಿನ ಗಣಪನನ್ನೇ ಕೂರಿಸಲು ಕಾತುರರಾಗಿದ್ದಾರೆ.
ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮಾರಾಟಕ್ಕೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮಣ್ಣಿನ ಗಣಪನನ್ನು ಕೂಡ ತಯಾರು ಮಾಡಲಾಗಿದೆ.
ಇನ್ನು ಜಲಮೂಲಗಳ ರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ನಿಸರ್ಗ ಸ್ನೇಹಿ ಹಾಗೂ ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಯುವಕರು ಪಿಒಪಿ ಗಣಪನನ್ನು ಕೂರಿಸುವ ಯೋಜನೆ ಕೈಬಿಟ್ಟಿದ್ದು, ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ ಅದ್ಧೂರಿಯಾಗಿ ಹಬ್ಬ ಮಾಡಲು ಕಾತುರರಾಗಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…