ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.
ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…