ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.
ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…