ಮೈಸೂರು ನಗರ

ಜಾತಿ ಜನಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

3 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

5 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

5 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

7 hours ago