ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮೊದಲು ಆರ್.ಅಶೋಕ್ ರಾಜೀನಾಮೆ ಕೊಟ್ಟು ಮಾತನಾಡಲಿ. ಬಿಡಿಎ ಜಮೀನನ್ನು ಡಿನೋಟಿಫಿಕೇಷನ್ ಮಾಡಿಸುತ್ತಾರೆ. ಬೇರೆಯವರ ಹೆಸರಿನಲ್ಲಿ ಅಶೋಕ್ ಭೂಮಿ ಖರೀದಿಸಿದ್ದಾರೆ. ಡಿನೋಟಿಫಿಕೇಷನ್ಗೂ ಮೊದಲೇ ಖರೀದಿ ಮಾಡಿದ್ದಾರೆ. ಹೀಗಾಗಿ ಆರ್.ಅಶೋಕ್ ಮಾಡಿರೋದು ಬಹಳ ನ್ಯಾಯನಾ ಎಂದು ಪ್ರಶ್ನೆ ಮಾಡಿದರು.
ಮೊದಲು ಸಿಎಂ ರಾಜೀನಾಮೆ ಕೇಳುವುದಕ್ಕಿಂತಲೂ ಮುಂಚೆ ಆರ್.ಅಶೋಕ್ ಅವರು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಬಳಿಕ ಸಿಎಂ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…