ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮೊದಲು ಆರ್.ಅಶೋಕ್ ರಾಜೀನಾಮೆ ಕೊಟ್ಟು ಮಾತನಾಡಲಿ. ಬಿಡಿಎ ಜಮೀನನ್ನು ಡಿನೋಟಿಫಿಕೇಷನ್ ಮಾಡಿಸುತ್ತಾರೆ. ಬೇರೆಯವರ ಹೆಸರಿನಲ್ಲಿ ಅಶೋಕ್ ಭೂಮಿ ಖರೀದಿಸಿದ್ದಾರೆ. ಡಿನೋಟಿಫಿಕೇಷನ್ಗೂ ಮೊದಲೇ ಖರೀದಿ ಮಾಡಿದ್ದಾರೆ. ಹೀಗಾಗಿ ಆರ್.ಅಶೋಕ್ ಮಾಡಿರೋದು ಬಹಳ ನ್ಯಾಯನಾ ಎಂದು ಪ್ರಶ್ನೆ ಮಾಡಿದರು.
ಮೊದಲು ಸಿಎಂ ರಾಜೀನಾಮೆ ಕೇಳುವುದಕ್ಕಿಂತಲೂ ಮುಂಚೆ ಆರ್.ಅಶೋಕ್ ಅವರು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಬಳಿಕ ಸಿಎಂ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…