ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಎಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ಸುಪ್ರೀಂಕೋರ್ಟ್ಗೆ ಹೋದ್ರು ನಿಮ್ಮ ಪರ ತೀರ್ಪು ಬರಲ್ಲ. ಹಾಗಾಗಿ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯನವರೇ ನೀವು ರಾಜೀನಾಮೆ ಕೊಡಲೇಬೇಕು. ನಾನು ಈ ಹಿಂದೆ ಮಾಡಿದ್ದ ಪ್ರೆಸ್ಮೀಟ್ನಲ್ಲಿ 14 ಸೈಟ್ಗಳನ್ನು ವಾಪಸ್ ಕೊಡಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯಗೆ ಮನವಿ ಮಾಡಿದ್ದೆ. ಆದರೆ ಇದೆಲ್ಲಾ ಆಗಲಿಲ್ಲ. ಈಗ ಹೈಕೋರ್ಟ್ ತೀರ್ಪು ಬಂದಿದೆ. ನೀವು ಸುಪ್ರೀಂಕೋರ್ಟ್ಗೆ ಹೋದರೂ ನಿಮ್ಮ ಪರ ತೀರ್ಪು ಬರಲ್ಲ ಎಂದು ಕಿಡಿಕಾರಿದರು.