ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಇದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರು ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದರು.
ದೇವರಾಜ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದೆ. ಇದನ್ನು ನವೀಕರಣ ಮಾಡಬೇಕು ಎನ್ನುವುದು ನಮ್ಮ ಆಶಯ. ಇಡೀ ಕಟ್ಟಡ ಶಿಥಿಲಗೊಂಡಿಲ್ಲ. ಎಲ್ಲಿ ಶಿಥಿಲ ಆಗಿದೆಯೋ ಅಲ್ಲಿ ನವೀಕರಣ ಮಾಡಬಹುದು ಎಂದು ಹೇಳಿದರು.
2016ರಲ್ಲಿ ಒಂದು ಭಾಗದಲ್ಲಿ ಕಟ್ಟಡ ಕುಸಿಯಿತು. ಕಟ್ಟಡ ಶಿಥಿಲಗೊಂಡಿದೆ ಎಂದು ಬಿಂಬಿಸಲು ಬೇಕಂತಲೇ ಅದನ್ನು ಬೀಳಿಸಲಾಗಿದೆ. ತಜ್ಞರ ಆಯೋಗ ಪರಿಶೀಲಿಸಿ ಕಟ್ಟಡ ಸುಸ್ಥಿತಿಯಲ್ಲಿದೆ ಎಂದು ವರದಿ ನೀಡಿದೆ. ಅದನ್ನು ಕೂಡ ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡು ಸಕರಾತ್ಮಕ ತೀರ್ಪು ನೀಡುವ ಭರವಸೆ ಇದೆ. ನ್ಯಾಯಾಲಯ ಏನೇ ತೀರ್ಪು ನೀಡಿದರೂ ಅದಕ್ಕೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದರು.
ನಿನ್ನೆ ನಡೆದ ಮೈಸೂರು ಅಭಿವೃದ್ಧಿ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಶಿಥಿಲ ವ್ಯವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…