ಮೈಸೂರು ನಗರ

ದೇವರಾಜ ಮಾರುಕಟ್ಟೆ ತೆರವು: ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌

ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರು ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದರು.

ದೇವರಾಜ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದೆ. ಇದನ್ನು ನವೀಕರಣ ಮಾಡಬೇಕು ಎನ್ನುವುದು ನಮ್ಮ ಆಶಯ. ಇಡೀ ಕಟ್ಟಡ ಶಿಥಿಲಗೊಂಡಿಲ್ಲ. ಎಲ್ಲಿ ಶಿಥಿಲ ಆಗಿದೆಯೋ ಅಲ್ಲಿ ನವೀಕರಣ ಮಾಡಬಹುದು ಎಂದು ಹೇಳಿದರು.

2016ರಲ್ಲಿ ಒಂದು ಭಾಗದಲ್ಲಿ ಕಟ್ಟಡ ಕುಸಿಯಿತು. ಕಟ್ಟಡ ಶಿಥಿಲಗೊಂಡಿದೆ ಎಂದು ಬಿಂಬಿಸಲು ಬೇಕಂತಲೇ ಅದನ್ನು ಬೀಳಿಸಲಾಗಿದೆ. ತಜ್ಞರ ಆಯೋಗ ಪರಿಶೀಲಿಸಿ ಕಟ್ಟಡ ಸುಸ್ಥಿತಿಯಲ್ಲಿದೆ ಎಂದು ವರದಿ ನೀಡಿದೆ. ಅದನ್ನು ಕೂಡ ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡು ಸಕರಾತ್ಮಕ ತೀರ್ಪು ನೀಡುವ ಭರವಸೆ ಇದೆ. ನ್ಯಾಯಾಲಯ ಏನೇ ತೀರ್ಪು ನೀಡಿದರೂ ಅದಕ್ಕೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದರು.

ನಿನ್ನೆ ನಡೆದ ಮೈಸೂರು ಅಭಿವೃದ್ಧಿ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಶಿಥಿಲ ವ್ಯವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

 

ಆಂದೋಲನ ಡೆಸ್ಕ್

Recent Posts

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

6 mins ago

ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…

37 mins ago

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

3 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

3 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

3 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

3 hours ago