ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.
ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನು ಓದಿ: ಮೈಸೂರು| ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣ
ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.
ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.
ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ. ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…