ಮೈಸೂರು ನಗರ

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿ: ಮೈಸೂರು| ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣ

ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ. ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago