ಮೈಸೂರು ನಗರ

ನವೆಂಬರ್.3ರಂದು ದೇವರಾಜ ಅರಸು ಪ್ರತಿಮೆ ಅನಾವರಣ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಇದೇ ನವೆಂಬರ್.3ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುತ್ತೇವೆ‌ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಆಗ್ರಹ ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದರು. ಬೌದ್ಧ ಸಮ್ಮೇಳನದಲ್ಲಿ ಈ ಬಗ್ಗೆ ಮನವಿ ಕೊಡಲಾಗಿದೆ. ಮನವಿಯನ್ನು ಕನ್ನಡ ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸುತ್ತಿದೆ ಎಂದರು.

ಇನ್ನು ನವೆಂಬರ್.3ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುತ್ತೇವೆ‌. ಸಿಎಂ ಕೈಯಲ್ಲೇ ಪ್ರತಿಮೆ ಅನಾವರಣ ಮಾಡಿಸುವ ಸಲುವಾಗಿ ವಿಳಂಬವಾಗಿತ್ತು‌. ನಾವೇ ಮಾಡಿದರೆ ಅಷ್ಟೊಂದು ಮಹತ್ವ ಬರುವುದಿಲ್ಲ. ಸಿಎಂ ಪ್ರತಿಮೆ ಅನಾವರಣ ಮಾಡಲಿ ಎಂಬುದು ನಮ್ಮ ಉದ್ದೇಶವಾಗಿತ್ತು ಎಂದು ಹೇಳಿದರು.

ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಇನ್ನು ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತೆ ಎಂಬ ವಿಚಾರದ ಕುರಿತು ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ ಬ್ರಾಂತಿಯೂ ಇಲ್ಲ. ಯಾವಾಗ ಏನು ಆಗಬೇಕು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಇರುತ್ತಾರೆ‌. ಸಚಿವರಾಗಬೇಕು ಎಲ್ಲರಿಗೂ ಆಸೆ ಇರುತ್ತದೆ. ಆಸೆ ತಪ್ಪು ಎಂದು ಹೇಳುವುದಿಲ್ಲ. ಇದು ಸಹಜ ಅಷ್ಟೇ. ನಮ್ಮಲ್ಲಿ ಏನೇ ತೀರ್ಮಾನ ಆದ್ರು ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಇನ್ನು ಸಂಪುಟ ಸಭೆ ಸಚಿವ ಜಾರ್ಜ್ ಜೊತೆಗೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ಸಭೆ ಸೇರುವುದೇ ಚರ್ಚೆಗಾಗಿ. ಅದು ಚರ್ಚೆ ಅಷ್ಟೇ ಗಲಾಟೆ ಅಲ್ಲ. ಒಂದು ವಿಷಯದ ಬಗ್ಗೆ ಚರ್ಚೆ ಮಾಡಿದ್ದೇವೆ. ನಂತರ ಅದಕ್ಕೆ ಪರಿಹಾರವು ಸಿಕ್ಕಿದೆ. ಅಲ್ಲಿಗೆ ಎಲ್ಲವೂ ಮುಗಿದಿದೆ ಅಷ್ಟೇ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

11 mins ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

1 hour ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

2 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

2 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

3 hours ago