deve gowda hdk
ಮೈಸೂರು: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಎಚ್ಡಿಕೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಬಗ್ಗೆ ದಿನನಿತ್ಯವೂ ಪತ್ರಿಕೆ ಓದಿ ತಿಳಿದುಕೊಳ್ಳುತ್ತೇನೆ. ಇಲ್ಲಿ ಯಾವ ರೀತಿ ಆಡಳಿತ ನಡೆಯುತ್ತಿದೆ ಎಂದು ಗಮನಿಸುತ್ತಿದ್ದೇನೆ. ಆದ್ರೆ ಸತ್ಯ ಹೇಳೋದಕ್ಕೆ ಆಗಲ್ಲ ರಿಯಾಕ್ಟ್ ಮಾಡಲ್ಲ. ಈಗ ರಿಯಾಕ್ಟ್ ಮಾಡುವ ಸಮಯವೂ ಅಲ್ಲ. ಆದ್ರೆ ಒಂದು ಮಾತು ಹೇಳುತ್ತೇನೆ ನನಗೇನಾದರೂ ದೇವರು ಆಯಸ್ಸು ಕೊಟ್ರೆ ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಕುಮಾರಸ್ವಾಮಿ ನಾಯಕತ್ವಕ್ಕೆ ಬಲ ತುಂಬುತ್ತೇನೆ.
ನಮ್ಮ ಪಕ್ಷಕ್ಕೆ ಕುಮಾರಸ್ವಾಮಿ ನಾಯಕತ್ವ ಬೇಕು. ಅವ್ರಿಗೆ ಶಕ್ತಿ ತುಂಬಬೇಕು ನನ್ನ ಕೈನಲ್ಲಿ ಎಷ್ಟು ಸಾಧ್ಯ ನಮ್ಮ ಮುಖಂಡರ ಕೈನಲ್ಲಿ ಎಷ್ಟು ಸಾಧ್ಯ ಅಷ್ಟು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸಭೆ ಮಾಡುತ್ತೇವೆ. ನಿಖಿಲ್ ಕುಮಾರಸ್ವಾಮಿ ಗೂ ಶಕ್ತಿ ತುಂಬುವ ಕೆಲಸ ಮಾಡ್ತೀವಿ ಎಂದರು.
ಇನ್ನೂ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕೈ ಮಾಡಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆನಂದವಾಗಿ ನಿದ್ರೆ ಮಾಡಿಕೊಂಡು ಬೆಂಗಳೂರಿನಿಂದ ಬಂದಿದ್ದೇನೆ. ರಾಜ್ಯದ ರಾಜಕಾರಣ ಬಗ್ಗೆ ಆಗಲಿ, ಸಿಎಂ ಬಗ್ಗೆ ಆಗಲಿ, ಕಾಂಗ್ರೆಸ್ ಅಧ್ಯಕ್ಷ ಡಿಸಿಎಂ ಬಗ್ಗೆ ಯಾರ ಬಗ್ಗೆಯೂ ನಾನು ಏನು ಮಾತನಾಡಲ್ಲ ಎಂದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…