deve gowda hdk
ಮೈಸೂರು: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಎಚ್ಡಿಕೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಬಗ್ಗೆ ದಿನನಿತ್ಯವೂ ಪತ್ರಿಕೆ ಓದಿ ತಿಳಿದುಕೊಳ್ಳುತ್ತೇನೆ. ಇಲ್ಲಿ ಯಾವ ರೀತಿ ಆಡಳಿತ ನಡೆಯುತ್ತಿದೆ ಎಂದು ಗಮನಿಸುತ್ತಿದ್ದೇನೆ. ಆದ್ರೆ ಸತ್ಯ ಹೇಳೋದಕ್ಕೆ ಆಗಲ್ಲ ರಿಯಾಕ್ಟ್ ಮಾಡಲ್ಲ. ಈಗ ರಿಯಾಕ್ಟ್ ಮಾಡುವ ಸಮಯವೂ ಅಲ್ಲ. ಆದ್ರೆ ಒಂದು ಮಾತು ಹೇಳುತ್ತೇನೆ ನನಗೇನಾದರೂ ದೇವರು ಆಯಸ್ಸು ಕೊಟ್ರೆ ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಕುಮಾರಸ್ವಾಮಿ ನಾಯಕತ್ವಕ್ಕೆ ಬಲ ತುಂಬುತ್ತೇನೆ.
ನಮ್ಮ ಪಕ್ಷಕ್ಕೆ ಕುಮಾರಸ್ವಾಮಿ ನಾಯಕತ್ವ ಬೇಕು. ಅವ್ರಿಗೆ ಶಕ್ತಿ ತುಂಬಬೇಕು ನನ್ನ ಕೈನಲ್ಲಿ ಎಷ್ಟು ಸಾಧ್ಯ ನಮ್ಮ ಮುಖಂಡರ ಕೈನಲ್ಲಿ ಎಷ್ಟು ಸಾಧ್ಯ ಅಷ್ಟು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸಭೆ ಮಾಡುತ್ತೇವೆ. ನಿಖಿಲ್ ಕುಮಾರಸ್ವಾಮಿ ಗೂ ಶಕ್ತಿ ತುಂಬುವ ಕೆಲಸ ಮಾಡ್ತೀವಿ ಎಂದರು.
ಇನ್ನೂ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕೈ ಮಾಡಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆನಂದವಾಗಿ ನಿದ್ರೆ ಮಾಡಿಕೊಂಡು ಬೆಂಗಳೂರಿನಿಂದ ಬಂದಿದ್ದೇನೆ. ರಾಜ್ಯದ ರಾಜಕಾರಣ ಬಗ್ಗೆ ಆಗಲಿ, ಸಿಎಂ ಬಗ್ಗೆ ಆಗಲಿ, ಕಾಂಗ್ರೆಸ್ ಅಧ್ಯಕ್ಷ ಡಿಸಿಎಂ ಬಗ್ಗೆ ಯಾರ ಬಗ್ಗೆಯೂ ನಾನು ಏನು ಮಾತನಾಡಲ್ಲ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…