deve gowda hdk
ಮೈಸೂರು: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಎಚ್ಡಿಕೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಬಗ್ಗೆ ದಿನನಿತ್ಯವೂ ಪತ್ರಿಕೆ ಓದಿ ತಿಳಿದುಕೊಳ್ಳುತ್ತೇನೆ. ಇಲ್ಲಿ ಯಾವ ರೀತಿ ಆಡಳಿತ ನಡೆಯುತ್ತಿದೆ ಎಂದು ಗಮನಿಸುತ್ತಿದ್ದೇನೆ. ಆದ್ರೆ ಸತ್ಯ ಹೇಳೋದಕ್ಕೆ ಆಗಲ್ಲ ರಿಯಾಕ್ಟ್ ಮಾಡಲ್ಲ. ಈಗ ರಿಯಾಕ್ಟ್ ಮಾಡುವ ಸಮಯವೂ ಅಲ್ಲ. ಆದ್ರೆ ಒಂದು ಮಾತು ಹೇಳುತ್ತೇನೆ ನನಗೇನಾದರೂ ದೇವರು ಆಯಸ್ಸು ಕೊಟ್ರೆ ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಕುಮಾರಸ್ವಾಮಿ ನಾಯಕತ್ವಕ್ಕೆ ಬಲ ತುಂಬುತ್ತೇನೆ.
ನಮ್ಮ ಪಕ್ಷಕ್ಕೆ ಕುಮಾರಸ್ವಾಮಿ ನಾಯಕತ್ವ ಬೇಕು. ಅವ್ರಿಗೆ ಶಕ್ತಿ ತುಂಬಬೇಕು ನನ್ನ ಕೈನಲ್ಲಿ ಎಷ್ಟು ಸಾಧ್ಯ ನಮ್ಮ ಮುಖಂಡರ ಕೈನಲ್ಲಿ ಎಷ್ಟು ಸಾಧ್ಯ ಅಷ್ಟು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸಭೆ ಮಾಡುತ್ತೇವೆ. ನಿಖಿಲ್ ಕುಮಾರಸ್ವಾಮಿ ಗೂ ಶಕ್ತಿ ತುಂಬುವ ಕೆಲಸ ಮಾಡ್ತೀವಿ ಎಂದರು.
ಇನ್ನೂ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕೈ ಮಾಡಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆನಂದವಾಗಿ ನಿದ್ರೆ ಮಾಡಿಕೊಂಡು ಬೆಂಗಳೂರಿನಿಂದ ಬಂದಿದ್ದೇನೆ. ರಾಜ್ಯದ ರಾಜಕಾರಣ ಬಗ್ಗೆ ಆಗಲಿ, ಸಿಎಂ ಬಗ್ಗೆ ಆಗಲಿ, ಕಾಂಗ್ರೆಸ್ ಅಧ್ಯಕ್ಷ ಡಿಸಿಎಂ ಬಗ್ಗೆ ಯಾರ ಬಗ್ಗೆಯೂ ನಾನು ಏನು ಮಾತನಾಡಲ್ಲ ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…