deve gowda hdk
ಮೈಸೂರು: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಎಚ್ಡಿಕೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಬಗ್ಗೆ ದಿನನಿತ್ಯವೂ ಪತ್ರಿಕೆ ಓದಿ ತಿಳಿದುಕೊಳ್ಳುತ್ತೇನೆ. ಇಲ್ಲಿ ಯಾವ ರೀತಿ ಆಡಳಿತ ನಡೆಯುತ್ತಿದೆ ಎಂದು ಗಮನಿಸುತ್ತಿದ್ದೇನೆ. ಆದ್ರೆ ಸತ್ಯ ಹೇಳೋದಕ್ಕೆ ಆಗಲ್ಲ ರಿಯಾಕ್ಟ್ ಮಾಡಲ್ಲ. ಈಗ ರಿಯಾಕ್ಟ್ ಮಾಡುವ ಸಮಯವೂ ಅಲ್ಲ. ಆದ್ರೆ ಒಂದು ಮಾತು ಹೇಳುತ್ತೇನೆ ನನಗೇನಾದರೂ ದೇವರು ಆಯಸ್ಸು ಕೊಟ್ರೆ ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಕುಮಾರಸ್ವಾಮಿ ನಾಯಕತ್ವಕ್ಕೆ ಬಲ ತುಂಬುತ್ತೇನೆ.
ನಮ್ಮ ಪಕ್ಷಕ್ಕೆ ಕುಮಾರಸ್ವಾಮಿ ನಾಯಕತ್ವ ಬೇಕು. ಅವ್ರಿಗೆ ಶಕ್ತಿ ತುಂಬಬೇಕು ನನ್ನ ಕೈನಲ್ಲಿ ಎಷ್ಟು ಸಾಧ್ಯ ನಮ್ಮ ಮುಖಂಡರ ಕೈನಲ್ಲಿ ಎಷ್ಟು ಸಾಧ್ಯ ಅಷ್ಟು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸಭೆ ಮಾಡುತ್ತೇವೆ. ನಿಖಿಲ್ ಕುಮಾರಸ್ವಾಮಿ ಗೂ ಶಕ್ತಿ ತುಂಬುವ ಕೆಲಸ ಮಾಡ್ತೀವಿ ಎಂದರು.
ಇನ್ನೂ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕೈ ಮಾಡಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆನಂದವಾಗಿ ನಿದ್ರೆ ಮಾಡಿಕೊಂಡು ಬೆಂಗಳೂರಿನಿಂದ ಬಂದಿದ್ದೇನೆ. ರಾಜ್ಯದ ರಾಜಕಾರಣ ಬಗ್ಗೆ ಆಗಲಿ, ಸಿಎಂ ಬಗ್ಗೆ ಆಗಲಿ, ಕಾಂಗ್ರೆಸ್ ಅಧ್ಯಕ್ಷ ಡಿಸಿಎಂ ಬಗ್ಗೆ ಯಾರ ಬಗ್ಗೆಯೂ ನಾನು ಏನು ಮಾತನಾಡಲ್ಲ ಎಂದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…