ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರವೂ ಭಕ್ತರ ದಂಡು

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 2ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಇದೆ.

ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಕೆ ನೀಡುತ್ತಿದ್ದಾರೆ.

ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿಜಯಲಕ್ಷ್ಮೀ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ವಿವಿಧ ಹೂವು-ಹಣ್ಣುಗಳಿಂದ ಅಲಂಕಾರ ಮಾಡಲಾಗಿದ್ದು, ಇಂದು ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.

ಇನ್ನು ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದ್ದು, ಉಚಿತ ದರ್ಶನ, 300 ರೂಪಾಯಿ ದರ್ಶನ ಹಾಗೂ 2000 ರೂಪಾಯಿ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ಚಾಮುಂಡಿಬೆಟ್ಟದ ಪ್ರಾಧಿಕಾರದ ವತಿಯಿಂದಲೇ ದರ್ಶನಕ್ಕೆ ಬಂದ ಭಕ್ತರಿಗೆ ಚಿಕ್ಕ ಡ್ರೈಫ್ರೂಟ್ಸ್‌ ಪ್ಯಾಕೆಟ್‌ ನೀಡಲಾಗುತ್ತದೆ. ಜೊತೆಗೆ ವಿಶೇಷ ದರ್ಶನಕ್ಕೆ ಹಣ ನೀಡಿ ರಶೀದಿ ಪಡೆದವರಿಗೆ ವಿಶೇಷ ದರ್ಶನದ ಜೊತೆಗೆ ಅರಿಶಿನ, ಕುಂಕುಮ ಹಾಗೂ ಇತರ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ಜೊತೆಗೆ ಚಾಮುಂಡೇಶ್ವರಿ ದೇವಾಲಯದ ಒಳಭಾಗದಲ್ಲಿ ಮೊಬೈಲ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ದೇವಾಲಯದ ಉತ್ಸವ, ಗರ್ಭಗುಡಿ ಹಾಗೂ ಇತರ ಭಾಗಗಳಲ್ಲಿ ಮೊಬೈಲ್‌ನಲ್ಲಿ ಫೋಟೋ ತೆಗೆಯುವುದು ಹಾಗೂ ರೀಲ್ಸ್‌ ಮಾಡುವುದನ್ನು ನಿಷೇಧಿಸಲಾಗಿದೆ.

ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದ್ದು, ಭಕ್ತರಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

5 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

5 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

5 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

6 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

6 hours ago