ಮೈಸೂರು ನಗರ

ಸೆ.1ರಂದು ಭಕ್ತರಿಗೆ ಈ ಸಮಯದಲ್ಲಿ ಸಿಗಲ್ಲ ಚಾಮುಂಡೇಶ್ವರಿ ದರ್ಶನ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ತಾವರೆಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ದರ್ಶನ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 7.30ರಿಂದ 2 ಗಂಟೆಯವರೆಗೆ ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ನಂತರ ರಾತ್ರಿ 8.30ರಿಂದ ಮುಂದುವರಿದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಈ ಸಂಬಂಧ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆ ಬಿಡುಗಡೆ ಮಾಡಿ, ರಾಷ್ಟ್ರಪತಿಯವರ ಆಗಮನ ಸಂದರ್ಭದಲ್ಲಿ ಭದ್ರತಾ ಕ್ರಮಗಳ ಭಾಗವಾಗಿ ವಿಧಿಸಿರುವ ನಿಬಂಧನೆಗಳಿಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago