Public access prohibited
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ತಾವರೆಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ದರ್ಶನ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 7.30ರಿಂದ 2 ಗಂಟೆಯವರೆಗೆ ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ನಂತರ ರಾತ್ರಿ 8.30ರಿಂದ ಮುಂದುವರಿದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಈ ಸಂಬಂಧ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆ ಬಿಡುಗಡೆ ಮಾಡಿ, ರಾಷ್ಟ್ರಪತಿಯವರ ಆಗಮನ ಸಂದರ್ಭದಲ್ಲಿ ಭದ್ರತಾ ಕ್ರಮಗಳ ಭಾಗವಾಗಿ ವಿಧಿಸಿರುವ ನಿಬಂಧನೆಗಳಿಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…