Committed to bilingual formula in the state: CM Siddaramaiah clarifies
ಮೈಸೂರು: ಧರ್ಮಸ್ಥಳ ಅಪರಿಚಿತ ಶವಗಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳಿದರೂ ಅಂತಾ ಎಸ್ಐಟಿ ರಚನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರು ಅಂತ ಕಾರಣಕ್ಕೆ ದಿಢೀರ್ ಎಸ್ಐಟಿ ಮಾಡಲು ಆಗುವುದಿಲ್ಲ.
ಎತ್ತು ಮರಿ ಹಾಕಿತ್ತು ಅಂತ ಹೇಳಿ ಕೊಟ್ಟಿಗೆ ರೆಡಿ ಮಾಡಲು ಸಾಧ್ಯನಾ ಎಂದು ಪ್ರಶ್ನೆ ಮಾಡಿದ ಅವರು, ಇದು ಅದೇ ರೀತಿ. ಒಬ್ಬ ವ್ಯಕ್ತಿ ಬಂದು ಸ್ವಇಚ್ಛೆಯಿಂದ ಹೇಳಿಕೆ ಕೊಟ್ಟಿದ್ದಾನೆ. ನಾನು ಧರ್ಮಸ್ಥಳದಲ್ಲಿ ಎಷ್ಟೋ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಪೊಲೀಸರು ಏನು ವರದಿ ಕೊಡುತ್ತಾರೆ ನೋಡೋಣಾ.
ಆ ವರದಿ ಆಧಾರದ ಮೇಲೆ ನಾವು ಮುಂದಿನ ಕ್ರಮ ಹೇಳುತ್ತೇವೆ. ಈಗಲೇ ಯಾರೋ ಹೇಳಿದರು ಎಂದು ಏನೇನೊ ಘೋಷಣೆ ಮಾಡಲು ಸಾಧ್ಯವಿಲ್ಲ. ಧರ್ಮಸ್ಥಳದ ಪ್ರಕರಣದಲ್ಲಿ ನಮ್ಮ ಮೇಲೆ ಯಾರ ಒತ್ತಡ ಇಲ್ಲ. ಒತ್ತಡ ಬಂದರೂ ನಾವು ಅದಕ್ಕೆ ಬಗ್ಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಆರ್ಸಿಬಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ನಾ ಅವರು ವರದಿ ಕೊಟ್ಟಿದ್ದಾರೆ. ಆ ವರದಿ ಸಂಪುಟದಲ್ಲಿ ಮಂಡನೆಯಾಗಿದೆ. ಆದರೆ ಈ ಬಗ್ಗೆ ಚರ್ಚೆ ಆಗಿಲ್ಲ. ಆ ವರದಿಯ ಮುಖ್ಯ ಅಂಶಗಳನ್ನು ಸಚಿವರಿಗೆ ಕೊಟ್ಟಿದ್ದೇವೆ. ಮುಂದಿನ ಸಭೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…