money fraud
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.೨ರಂದು ವಾಟ್ಸಾಪ್ ಕರೆ ಮಾಡಿ, ಟ್ರಾಯ್ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ ಸೈಬರ್ ವಂಚಕರು, ನಿಮ್ಮ ಆಧಾರ್ ದುರುಪಯೋಗವಾಗಿದೆ ಎಂದು ಬೆದರಿಸಿದ್ದಾರೆ. ಅಲ್ಲದೆ, ಕರೆಯನ್ನು ಮುಂಬೈ ಸೈಬರ್ ಬ್ರಾಂಚ್ಗೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ವಾಟ್ಸಾಪ್ನಲ್ಲಿ ವಿಡಿಯೋ ಕರೆ ಮಾಡಿದ ವಂಚಕರು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದು, ನಿಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಬೇಕು. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣವನ್ನು ನಮಗೆ ವರ್ಗಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ಇದನ್ನು ನಂಬಿದ ದಂಪತಿ, ತಮ್ಮ ಬ್ಯಾಂಕ್ ಖಾತೆಯಿಂದ ೪೦ ಲಕ್ಷ ರೂ. ಮತ್ತು ಅವರ ಪತ್ನಿ ಖಾತೆಯಿಂದ ೬೦,೫೦,೦೦೦ ರೂ. ಹಣವನ್ನು ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗೆ ಕಳುಹಿಸಿದ್ದಾರೆ. ವಂಚಕರು ಹೇಳಿದಂತೆ ಮೂರು ದಿನಗಳಾದರೂ ವಾಪಸ್ ತಮ್ಮ ಖಾತೆಗೆ ಹಣ ಬಾರದಿದ್ದಾಗ ವಂಚನೆಗೆ ಒಳಗಾಗಿರು ವುದು ಮನವರಿಕೆಯಾಗಿದೆ. ಈ ಸಂಬಂಧ ಮೋಸ ಹೋದ ದಂಪತಿ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…