money fraud
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.೨ರಂದು ವಾಟ್ಸಾಪ್ ಕರೆ ಮಾಡಿ, ಟ್ರಾಯ್ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ ಸೈಬರ್ ವಂಚಕರು, ನಿಮ್ಮ ಆಧಾರ್ ದುರುಪಯೋಗವಾಗಿದೆ ಎಂದು ಬೆದರಿಸಿದ್ದಾರೆ. ಅಲ್ಲದೆ, ಕರೆಯನ್ನು ಮುಂಬೈ ಸೈಬರ್ ಬ್ರಾಂಚ್ಗೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ವಾಟ್ಸಾಪ್ನಲ್ಲಿ ವಿಡಿಯೋ ಕರೆ ಮಾಡಿದ ವಂಚಕರು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದು, ನಿಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಬೇಕು. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣವನ್ನು ನಮಗೆ ವರ್ಗಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ಇದನ್ನು ನಂಬಿದ ದಂಪತಿ, ತಮ್ಮ ಬ್ಯಾಂಕ್ ಖಾತೆಯಿಂದ ೪೦ ಲಕ್ಷ ರೂ. ಮತ್ತು ಅವರ ಪತ್ನಿ ಖಾತೆಯಿಂದ ೬೦,೫೦,೦೦೦ ರೂ. ಹಣವನ್ನು ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗೆ ಕಳುಹಿಸಿದ್ದಾರೆ. ವಂಚಕರು ಹೇಳಿದಂತೆ ಮೂರು ದಿನಗಳಾದರೂ ವಾಪಸ್ ತಮ್ಮ ಖಾತೆಗೆ ಹಣ ಬಾರದಿದ್ದಾಗ ವಂಚನೆಗೆ ಒಳಗಾಗಿರು ವುದು ಮನವರಿಕೆಯಾಗಿದೆ. ಈ ಸಂಬಂಧ ಮೋಸ ಹೋದ ದಂಪತಿ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…