ಮೈಸೂರು ನಗರ

ರಾಜ್ಯದಲ್ಲಿ ತಾರಕಕ್ಕೇರಿದ ಸಿಎಂ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ಸಂಘಟನೆಗಳು

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶುರುವಾಗಿರುವ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಪರ ನಿಂತಿವೆ.

ರಾಜ್ಯದಲ್ಲಿ ಕಳೆದ ಕೆಲ ತಿಂಗಳುಗಳಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಮಾತು ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಬೇಸರ ಉಂಟು ಮಾಡಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಹಿಂದ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಪರ ನಿಂತಿದ್ದು, ಸಿದ್ದರಾಮಯ್ಯರನ್ನು 5 ವರ್ಷ ಸಿಎಂ ಆಗಿ ಮುಂದುವರಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಅಂಚೆ ಮೂಲಕ ಪತ್ರ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:-ರಾಜ್ಯದಲ್ಲಿ ತಾರಕಕ್ಕೇರಿದ ಸಿಎಂ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ಸಂಘಟನೆಗಳು

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ನಡೆದ ಪತ್ರ ಚಳುವಳಿಯಲ್ಲಿ ಮಾತನಾಡಿದ ಅಹಿಂದ ಸಂಘಟನೆ ನಾಯಕರು, ರಾಜ್ಯದಲ್ಲಿ ಇನ್ನು ಮುಂದೆ ಸಿಎಂ ಯಾರಾಗಬೇಕೆಂದು ಚರ್ಚೆಯಾಗಬಾರದು. ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷಗಳು ಸಿಎಂ ಆಗಿ ಇರುತ್ತಾರೆ ಎಂದು ರಾಹುಲ್ ಗಾಂಧಿ ಅವರು ಸ್ಪಷ್ಟಪಡಿಸಬೇಕು. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಬೇಕು. ಈ ರೀತಿ ಪದೇ ಪದೇ ಸಿಎಂ ಬದಲಾವಣೆ ಎಂದು ಚರ್ಚೆ ಮಾಡಿದರೆ ಸಿದ್ದರಾಮಯ್ಯ ಅವರಿಗೆ ಕೆಲಸ ಮಾಡಲು ಒತ್ತಡವಾಗುತ್ತದೆ. ಅಹಿಂದ ಸಮುದಾಯಗಳು ಶೇಕಡಾ 80% ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವಂತೆ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago