ಮೈಸೂರು ನಗರ

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಆಪ್ತ ಸಹಾಯಕ ಗೋಪಾಲ್ ಹೊರೆಯಾಲ ಅವರು ಗ್ರಾಮದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ನಗರದ ದಟ್ಟಗಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹಿರೀಕಾಟಿ ಗ್ರಾಮದ ಯಜಮಾನರು, ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ, ಅತೀ ಶೀಘ್ರದಲ್ಲೇ ಪ್ರತಿಮೆ ನಿರ್ಮಾಣ ಮಾಡಿ ಉದ್ಘಾಟಿಸಲು ನಿರ್ಧರಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಅಂದಾಜು ೧೦ ಲಕ್ಷ ರೂ. ಮಂಟಪ, ಸುತ್ತಲು ಗ್ರಿಲ್ ಸೇರಿದಂತೆ ಇನ್ನಿತರೆ ಸಿವಿಲ್ ಕಾಮಗಾರಿಗೆ ಅಂದಾಜು ೧೦ ಲಕ್ಷ ರೂ. ಸೇರಿದಂತೆ ೨೦ ಲಕ್ಷ ರೂ. ವೆಚ್ಚವಾಗುತ್ತದೆ ಎಂದು ವಿವರಿಸಿದರು. ಬಳಿಕ, ಸಮಾಜ ಕಲ್ಯಾಣ ಸಚಿವರಿಗೆ ಗ್ರಾಮದ ಮುಖಂಡರ ಕೋರಿಕೆಯನ್ನು ತಿಳಿಸಿ, ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸುವ ಆಶ್ವಾಸನೆ ನೀಡಿದರು.

ಬಳಿಕ ಅಂಬೇಡ್ಕರ್ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಹೆಚ್ಚುವರಿಯಾಗಿ ೧೦ ಲಕ್ಷ ರೂ. ಅನುದಾನದ ಅಗತ್ಯವಿರುವುದನ್ನು ಪ್ರಸ್ತಾಪಿಸಲಾಯಿತು. ಇದಕ್ಕೆ ಸ್ಪಂದಿಸಿದ ಗೋಪಾಲ್ ಹೊರೆಯಾಲ ಅವರು, ಸಚಿವರೊಂದಿಗೆ ಮಾತುಕತೆ ನಡೆಸಿ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದರು.

ಗ್ರಾಮಗಳಲ್ಲಿ ನಿರ್ಮಾಣವಾಗುವ ಪ್ರತಿಮೆಗಳು ಉದ್ಘಾಟನೆಯಾಗುವ ಜತೆಗೆ ಗ್ರಾಮದಲ್ಲಿ ಒಗ್ಗಟ್ಟು ಮೂಡಿಸುವಂತದಕ್ಕೆ ರೂಪುಗೊಳ್ಳಬೇಕು. ಅಂಬೇಡ್ಕರ್ ಅವರ ವಿಚಾರಗಳನ್ನು ಯುವಜನತೆಗೆ ತಿಳಿಸಬೇಕು. ಗ್ರಾಮದಲ್ಲಿ ಗುಂಪುಗಳಿಗೆ ಅವಕಾಶ ಕೊಡದೆ ಒಂದಾಗಿ ಸಾಗಬೇಕಿದೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

29 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

48 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago