ಮೈಸೂರು ನಗರ

ಮೊದಲನೇ ಆಷಾಡ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಣೆ

ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿಯ  ದರ್ಶನ ಪಡೆದು ತಾಯಿಗೆ ವಿಶೇಷವಾದ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.

ಇನ್ನು ಆಷಾಢ ಶುಕ್ರವಾರ ಪ್ರಯುಕ್ತ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಸೇವಾ ಸಮಿತಿಯಿಂದ ವಿಶೇಷ ಪೂಜೆಗಾಗಿ ೨೫ ಸಾವಿರ ಮೈಸೂರು ಪಾಕ್‌ ತಯಾರಿಸಲಾಗಿದೆ.  ಬೆಳಗ್ಗೆ ೬ ಗಂಟೆಯಿಂದ ಸಾಯಂಕಾಲ ೪ ಗಂಟೆವರೆಗೂ ಪ್ರಸಾದ ವಿನಿಯೋಗ ಮಾಡಲಾಗುತ್ತಿದೆ.

ಇನ್ನು ಈ ಮೈಸೂರು ಪಾಕ್‌ ಅನ್ನು ೪೦ ಜನ ಬಾಣಸಿಗರಿಂದ ತಯಾರಿಸಲಾಗಿದ್ದು, ಮೈಸೂರು ಪಾಕ್‌ ಗೆ ೨೦೦ ಕೆಜಿ ಕಡ್ಲೆಹಿಟ್ಟು, ೫೦೦ ಕೆಜಿ ಸಕ್ಕರೆ, ೩೦ ಲೀಟರ್‌ ಎಣ್ಣೆ, ೧೦೦ ಕೆಜಿ ತುಪ್ಪ, ೧೦೦ ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, ೩ ಕೆಜಿ ಏಲಕ್ಕಿ, ೨ ಕೆಜಿ ಅಡುಗೆ ಅರಿಶಿಣ ಬಳಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago