ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ತಾಯಿಗೆ ವಿಶೇಷವಾದ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.
ಇನ್ನು ಆಷಾಢ ಶುಕ್ರವಾರ ಪ್ರಯುಕ್ತ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಸೇವಾ ಸಮಿತಿಯಿಂದ ವಿಶೇಷ ಪೂಜೆಗಾಗಿ ೨೫ ಸಾವಿರ ಮೈಸೂರು ಪಾಕ್ ತಯಾರಿಸಲಾಗಿದೆ. ಬೆಳಗ್ಗೆ ೬ ಗಂಟೆಯಿಂದ ಸಾಯಂಕಾಲ ೪ ಗಂಟೆವರೆಗೂ ಪ್ರಸಾದ ವಿನಿಯೋಗ ಮಾಡಲಾಗುತ್ತಿದೆ.
ಇನ್ನು ಈ ಮೈಸೂರು ಪಾಕ್ ಅನ್ನು ೪೦ ಜನ ಬಾಣಸಿಗರಿಂದ ತಯಾರಿಸಲಾಗಿದ್ದು, ಮೈಸೂರು ಪಾಕ್ ಗೆ ೨೦೦ ಕೆಜಿ ಕಡ್ಲೆಹಿಟ್ಟು, ೫೦೦ ಕೆಜಿ ಸಕ್ಕರೆ, ೩೦ ಲೀಟರ್ ಎಣ್ಣೆ, ೧೦೦ ಕೆಜಿ ತುಪ್ಪ, ೧೦೦ ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, ೩ ಕೆಜಿ ಏಲಕ್ಕಿ, ೨ ಕೆಜಿ ಅಡುಗೆ ಅರಿಶಿಣ ಬಳಸಲಾಗಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…