ಮೈಸೂರು: ಈ ಬಾರಿ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ.
ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ.
ಪ್ರಸಾದ ಪ್ಯಾಕೇಟ್ನಲ್ಲಿ ಗೋಡಂಬಿ, ದ್ರಾಕ್ಷಿ, ಕಲ್ಲು ಸಕ್ಕರೆ, ಅಮ್ಮನವರ ಕುಂಕುಮವಿರಲಿದ್ದು, ಧರ್ಮ ದರ್ಶನದ ಸಾಲು ಹಾಗೂ ಮೆಟ್ಟಿಲು ಹತ್ತಿ ಬರುವ ಸಾರ್ವಜನಿಕರಿಗೆ ಈ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನೂರಾರು ಸಿಬ್ಬಂದಿಗಳಿಂದ ಪ್ರಸಾದದ ಪ್ಯಾಕೇಟ್ ತಯಾರಿ ಕಾರ್ಯ ನಡೆಯುತ್ತಿದೆ.