yaduveer
ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು
ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.
ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್ನಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ.
ಡಿಕೆಶಿ ಅವರು ಆರ್ಎಸ್ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ ಡ್ರಗ್ಸ್ ಪ್ರಕರಣ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…