ಮೈಸೂರು ನಗರ

ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆ ಹಾಸ್ಪಾಸ್ಪದ: ಸಂಸದ ಯದುವೀರ್ ಒಡೆಯರ್‌

ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ‌ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು

ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.

ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದ ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟಾಗಿದೆ.

ಡಿಕೆಶಿ ಅವರು ಆರ್‌ಎಸ್‌ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ‌ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ‌ ಹಿಂದೆ ಡ್ರಗ್ಸ್ ಪ್ರಕರಣ‌ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು‌ ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

1 min ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

4 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

13 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago